ಹರಿವ ನದಿಗೆ ಮೈಯೆಲ್ಲ ಕಾಲು
ಉರಿವ ಕಿಚ್ಚಿಗೆ ಮೈಯೆಲ್ಲ ಬಾಯಿ
ಬೀಸುವ ಗಾಳಿಗೆ ಮೈಯೆಲ್ಲ ಕೈ
ಇದು ಕಾರಣ ಗುಹೇಶ್ವರ
ನಿಮ್ಮ ಶರಣಂಗೆ ಸರ್ವಾಂಗವೆಲ್ಲ ಲಿಂಗಮಯ
ಹರಿಯುವ ಹೊಳೆಗೆ ಮೈಯೆಲ್ಲ ಕಾಲೇ ಆಗಿರುವಂತೆ, ಉರಿವ ಬೆಂಕಿಗೆ ಮೈಯೆಲ್ಲ ಬಾಯೇ ಆಗಿರುವಂತೆ, ಬೀಸುವ ಗಾಳಿಗೆ ಮೈಯೆಲ್ಲ ಕೈಯೇ ಆಗಿರುವಂತೆ ನಿಜವಾದ ಶರಣ, ಲಿಂಗದೊಡನೆ, ಇಡೀ ಸೃಷ್ಟಿಯೊಡನೆ ಒಂದಾದವನಾದ್ದರಿಂದ ಅವನ ಸರ್ವಾಂಗವೂ ಲಿಂಗವೇ. ಅವನು ಬೇರೆಯಲ್ಲ, ಲಿಂಗ ಬೇರೆಯಲ್ಲ.
ಎರಡಿಲ್ಲದ ಐಕ್ಯದ ಸ್ಥಿತಿಯನ್ನು ಅಲ್ಲಮನ ಈ ವಚನ ವಿವರಿಸುತ್ತದೆ. ( ಕೆಂಡಸಂಪಿಗೆಯಿಂದ)
No comments:
Post a Comment