ಎದೆಯು ಮರಳಿ ತೊಳಲುತಿದೆ,
ದೊರೆಯುದದನೆ ಹುಡುಕುತಿದೆ;
ಅತ್ತ ಇತ್ತ ದಿಕ್ಕುಗೆಟ್ಟು
ಬಳ್ಳಿಬಾಳು ಚಾಚುತಿದೆ
ತನ್ನ ಕುಡಿಯನು.
ಸಿಗಲಾರದ ಆಸರಕೆ
ಕಾದ ಕಾವ ಬೇಸರಕೆ
ಮಿಡುಕಿ ದುಡುಕಲೆಳಸುತಿದೆ
ತನ್ನ ಗಡಿಯನು.
ಅದಕು ಇದಕು ಅಂಗಲಾಚಿ
ತನ್ನೊಲವಿಗೆ ತಾನೆ ನಾಚಿ
ದಡವ ಮುಟ್ಟಿ ಮುಟ್ಟದೊಲು
ಹಿಂದೆಗೆಯುವ ವೀಚಿ ವೀಚಿ
ಮುರುಟದಲಿದೆ ಮನದಲಿ !
ನೀರದಗಳ ದೂರತೀರ
ಕರೆಯುತಲಿದೆ ಎದೆಯ ನೀರ,
ಮೀರುತಲಿದೆ ಹೃದಯಭಾರ
ತಾಳಲೆಂತು ನಾ ?
ಯಾವ ಬಲವು ಯಾವ ಒಲವು
ಕಾಯಬೇಕೋ ಅದರ ಹೊಳವು
ಕಾಣದೆ ದಳ್ಳಿಸಲು ಮನವು
ಬಾಳಲೆಂತು ನಾ ?
----- ಎಮ್. ಗೋಪಾಲಕೃಷ್ಣ ಅಡಿಗ.
1 comment:
ನಮಸ್ಕಾರ ರೇಣುಕ, ನಿಮಗೊಂದು ಆಹ್ವಾನ ಪತ್ರಿಕೆ..
ಕನ್ನಡಸಾಹಿತ್ಯ.ಕಾಂ ತನ್ನ ಎಂಟನೇ ವಾರ್ಷಿಕೊತ್ಸವದ ಅಂಗವಾಗಿ ಜೂನ್ ಎಂಟರಂದು ಕ್ರೈಸ್ಟ್ ಕಾಲೇಜಿನಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಏರ್ಪಡಿಸುತ್ತಿದೆ.
ವಿಷಯ:
ಅಂತರ್ಜಾಲದ ಸಂಧರ್ಭದಲ್ಲಿ, ಪ್ರಾದೇಶಿಕ ಭಾಷೆಯಲ್ಲಿ ಸೃಜನಶೀಲತೆ: ಗತಿಸ್ಥಿತಿ ಸವಾಲು.
ಕಾರ್ಯಕ್ರಮಕ್ಕೆ ಸೀಮಿತ ಆಸನಗಳು ಲಭ್ಯವಿರುವ ಕಾರಣ ಭಾಗವಹಿಸಲು ಆಸಕ್ತಿ ಇರುವವರು ದಯಮಾಡಿ ಮುಂಚಿತವಾಗಿ ಕೆಳಗೆ ಕೊಟ್ಟಿರುವ ಲಿಂಕ್ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ.
http://saadhaara.com/events/index/english
http://saadhaara.com/events/index/kannada
ಸಮಾರಂಭದಲ್ಲಿ ಭಾಗವಹಿಸಲು ನೋಂದಾವಣೆ ಕಡ್ಡಾಯ.
ಉತ್ಸಾಹ ಮತ್ತು ಸಮಯ ಇದ್ದರೆ ವಿಚಾರಸಂಕಿರಣದ ನಂತರ ಅನೌಪಚಾರಿಕವಾಗಿ ಬ್ಲಾಗಿಗಳಿಗೆ ‘ಬ್ಲಾಗೀ ಮಾತುಕತೆ’ ನಡೆಸುವ ಉದ್ದೇಶವೂ ಇದೆ.
ನೀವೂ ಬನ್ನಿ ಮತ್ತು ಆಸಕ್ತಿಯಿರುವ ನಿಮ್ಮ ಗೆಳೆಯರನ್ನು ಕರೆತನ್ನಿ.
-ಕನ್ನಡಸಾಹಿತ್ಯ.ಕಾಂ ಬಳಗ
ದಯಮಾಡಿ ಬನ್ನಿ ಮತ್ತು ಹೀಗೆ ಸ್ಪಾಮ್ ಮಾಡಿ ಆಹ್ವಾನಿಸುತ್ತಿರುವುದಕ್ಕೆ ಕ್ಷಮೆಯಿರಲಿ.
ಗುರು
Post a Comment