Showing posts with label ವಚನ. Show all posts
Showing posts with label ವಚನ. Show all posts

Wednesday, April 30, 2008

ವಚನ

ಹರಿವ ನದಿಗೆ ಮೈಯೆಲ್ಲ ಕಾಲು
ಉರಿವ ಕಿಚ್ಚಿಗೆ ಮೈಯೆಲ್ಲ ಬಾಯಿ
ಬೀಸುವ ಗಾಳಿಗೆ ಮೈಯೆಲ್ಲ ಕೈ
ಇದು ಕಾರಣ ಗುಹೇಶ್ವರ
ನಿಮ್ಮ ಶರಣಂಗೆ ಸರ್ವಾಂಗವೆಲ್ಲ ಲಿಂಗಮಯ


ಹರಿಯುವ ಹೊಳೆಗೆ ಮೈಯೆಲ್ಲ ಕಾಲೇ ಆಗಿರುವಂತೆ, ಉರಿವ ಬೆಂಕಿಗೆ ಮೈಯೆಲ್ಲ ಬಾಯೇ ಆಗಿರುವಂತೆ, ಬೀಸುವ ಗಾಳಿಗೆ ಮೈಯೆಲ್ಲ ಕೈಯೇ ಆಗಿರುವಂತೆ ನಿಜವಾದ ಶರಣ, ಲಿಂಗದೊಡನೆ, ಇಡೀ ಸೃಷ್ಟಿಯೊಡನೆ ಒಂದಾದವನಾದ್ದರಿಂದ ಅವನ ಸರ್ವಾಂಗವೂ ಲಿಂಗವೇ. ಅವನು ಬೇರೆಯಲ್ಲ, ಲಿಂಗ ಬೇರೆಯಲ್ಲ.
ಎರಡಿಲ್ಲದ ಐಕ್ಯದ ಸ್ಥಿತಿಯನ್ನು ಅಲ್ಲಮನ ಈ ವಚನ ವಿವರಿಸುತ್ತದೆ. ( ಕೆಂಡಸಂಪಿಗೆಯಿಂದ)